ವಿಷಯಕ್ಕೆ ಹೋಗಿ

ಭಾರತದ ಭೂಗೋಳ 1

ಭಾರತದ ಭೂಗೋಳ
1. ಭಾರತವು ಏಷ್ಯಾ ಖಂಡದಲ್ಲಿದೆ.
2. ಭಾರತವು ಭೂಮಿಯ ಉತ್ತರಾರ್ದಗೊಳದಲ್ಲಿದೆ.
3. ಭಾರತದ ಉಪಖಂಡದ ದಕ್ಷಿಣದ ತುದಿ ಇಂದಿರಾ ಪಾಯಿಂಟ.
4. ಇಂದಿರಾ ಪಾಯಿಂಟ ದಿ ಗ್ರೇಟ್ ನಿಕೋಬಾರ್ ದ್ವೀಪದಲ್ಲಿದೆ.
5. ಭಾರತದ ಕೇಂದ್ರ ಭಾಗದಲ್ಲಿ ಹಾದು ಹೋಗುವ ಆಕ್ಷಾಂಶ 23 1/2 ಉತ್ತರ ಅಕ್ಷಾಂಶ.
6. ಭಾರತದ ಅತ್ಯಂತ ದಕ್ಷಿಣದ ಪ್ರದೇಶ ಕನ್ಯಾಕುಮಾರಿ.
7. ಕರ್ಕಾಟಕ ಸಂಕ್ರಾಂತಿ ವೃತ್ತವು ಭಾರತದ 8 ರಾಜ್ಯಗಳ ಮೂಲಕ ಹಾದು ಹೋಗುತ್ತದೆ. ಅವು ಗುಜರಾತ, ರಾಜಸ್ಥಾನ, ಮದ್ಯಪ್ರದೇಶ, ಚತ್ತೀಸಗರ್, ಜಾರ್ಖಂಡ, ಪಶ್ಚಿಮ ಬಂಗಾಳ, ತ್ರಿಪುರಾ ಮತ್ತು ಮಿಜೋರಾಂ ಮೂಲಕ ಹಾದು ಹೋಗುತ್ತದೆ.
8. ಭಾರತದ ಆದರ್ಶ ಕಾಲವನ್ನು 82 1/2 ಡಿಗ್ರಿ ಪೂರ್ವ ರೇಖಾಂಶವನ್ನು ಆಧರಿಸಿ ತಿಳಿಯಲಾಗುತ್ತದೆ.
9. ಭಾರತದ ಒಟ್ಟು ಭೌಗೋಳಿಕ ಕ್ಷೇತ್ರ 32,87,263 ಚ.ಲಿ.ಮೀ (32.87 ಲಕ್ಷ)
10. ಭಾರತದ ಭೂಗಡಿ ರೇಖೆಯ ಉದ್ದ 15,200 ಕಿ ಮೀ 17 ರಾಜ್ಯಗಳು ಗಡಿಗೆ ಹೊಂದಿ ಇದ್ದು. 7 ದೇಶಗಳೊಂದಿಗೆ ಭೂ ಗಡಿಯನ್ನು ಹೊಂದಿದೆ.
11. ಭಾರತದ ಸಮುದ್ರ ತೀರ ಪ್ರದೇಶದ ಉದ್ದ 6,100 ಕಿ ಮೀ ಇದ್ದು. ದ್ವೀಪಗಳನ್ನು ಸೇರಿಸಿ 7,516.6 ಕಿ ಮೀ ಇದೆ.
12. ಭಾರತ ಮತ್ತು ಪಾಕಿಸ್ತಾನದ ಗಡಿ ರೇಖೆಯನ್ನು ರ್ಯಾಡಕ್ಲೀಪ್ ಎನ್ನುವರು. ಭಾರತ ಮತ್ತು ಅಪಘಾನಿಸ್ತಾನದ ಗಡಿ ರೇಖೆಯನ್ನು ಡ್ಯೂರಾಂಡ ಎನ್ನುವರು. ಭಾರತ ಮತ್ತು ಚೈನಾ ಗಡಿ ರೇಖೆಯನ್ನು ಮ್ಯಾಕಮೋಹನ ಎನ್ನುವರು.
13. ಭಾರತ ಮತ್ತು ಶ್ರೀಲಂಕಾವನ್ನು ಪಾಕ್ಜಲಸಂದಿ ಮತ್ತು ಮನ್ನಾರಖಾರಿ ಪ್ರತ್ಯೇಖಿಸುತ್ತವೆ.
14. ಭಾರತದ ಎರಡೂ ಪ್ರಮುಖ ದ್ವೀಪ ಸಮೂಹಗಳು ಅಂಡಮಾನ ಮತ್ತು ನಿಕೋಬಾರ-ಲಕ್ಷದ್ವೀಪ ಮತ್ತು ಮಿನಿಕಾಯ ದ್ವೀಪ ಸಮೂಹಗಳು.
15. ಸಾರ್ಕ-ಸೌತ ಏಶಿಯನ್ ಅಸೋಸಿಯೆಶನ್ ಆಪ್ ರಿಜಿನಲ್ ಕಾಪರ್ೊರೆಶನ್. ಸಪ್ತ-ದಿ ಸೌತ ಏಶಿಯನ್ ಪ್ರಿಪರೆಂಟಿಯಲ್ ಟ್ರೇಡ್ ಅಗ್ರಿಮೆಂಟ್.
16. ಇತ್ತಿಚ್ಚೆಗೆ ನಿರ್ಮಾಣಗೊಂಡ 4 ಹೊಸ ರಾಜ್ಯಗಳು. ಮದ್ಯ ಪ್ರದೇಶವನ್ನು ವಿಭಜಿಸಿ-ಚತ್ತೀಸಗರ್, ಉತ್ತರ ಪ್ರದೇಶವನ್ನು ವಿಭಜಿಸಿ-ಉತ್ತರಾಂಚಲ, ಬಿಹಾರವನ್ನು ವಿಭಜಿಸಿ-ಜಾರ್ಖಂಡ, ಆಂದ್ರ ಪ್ರದೇಶವನ್ನು ವಿಭಜಿಸಿ-ತೆಲಂಗಾಣ ರಾಜ್ಯಗಳನ್ನು ರಚನೆ ಮಾಡಲಾಗಿದೆ.
17. ಭಾರತದಲ್ಲಿ 29 ರಾಜ್ಯಗಳು ಹಾಗೂ 7 ಕೇಂದ್ರಾಡಳಿತ ಪ್ರದೇಶಗಳಿವೆ.
18. ಭಾರತದ ಅತೀ ದೊಡ್ಡ ರಾಜ್ಯ-ರಾಜ್ಯಸ್ಥಾನ ಅತೀ ಚಿಕ್ಕ ರಾಜ್ಯ-ಗೋವಾ.
19. ಭಾರತದ ಅತೀ ದೊಡ್ಡ ಕೇಂದ್ರಾಡಳಿತ ಪ್ರದೇಶ-ಅಂಡಮಾನ ಮತ್ತು ನಿಕೋಬಾರ್ ಮತ್ತು ಅತೀ ಚಿಕ್ಕ ಕೇಂದ್ರಾಡಳಿತ ಪ್ರದೇಶ-ಲಕ್ಷದ್ವೀಪ.
20. ಹೊಸದಾಗಿ ರಚನೆಯಾದ ಚತ್ತೀಸಗರ್ದ ರಾಜಧಾನಿ-ರಾಯಪುರ, ಜಾರ್ಖಂಡ ರಾಜಧಾನಿ- ರಾಂಚಿ, ಉತ್ತರಾಂಚಲದ ರಾಜದಾನಿ-ಡೆಹರಾಡೂನ್, ತೆಲಂಗಾಣದ ರಾಜಧಾನಿ-_______
21. ಭಾತರದ ಅತ್ಯಂತ ಪಶ್ಚಿಮದಲ್ಲಿರುವ ಪ್ರದೇಶ-ಗುಜರಾತ ರಾಜ್ಯ ತೀರದ ಸರ್ ಕ್ರಿಕ್ ಪ್ರದೇಶ  ಮತ್ತು ಅತ್ಯಂತ ಪೂರ್ವದಲ್ಲಿರುವ ಪ್ರದೇಶ ಅರುಣಾಚಲ ಪ್ರದೇಶದ ಪೂರ್ವ ಲೋಹಿತ ಜಿಲ್ಲೆಯ  ಗಡಿ ಪ್ರದೇಶ.
22. ಕೇಂದ್ರಾಡಳಿತ ಪ್ರದೇಶವಾದ ದೆಹಲಿಯ ಸೂತ್ತ-ಮೂತ್ತಲಿನ ರಾಜ್ಯಗಳ ಕೇಲವು ಜಿಲ್ಲೆಗಳ  ಭಾಗಗಳನ್ನು ಸೇರಿಸಿ (ನ್ಯಾಶನಲ್ ಕ್ಯಾಪಿಟಲ್ ರಿಜನ್ ಎನ್ಸಿಆರ್) ರಾಷ್ಟ್ರೀಯ ರಾಜಧಾನಿ  ಪ್ರದೇಶ ಎಂದು ಕರೆಯಲಾಗಿದೆ.
23. ಆಸಿಯಾನ್-ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ.
24. ಜಿ-4 ರಾಷ್ಟ್ರಗಳು ಭಾರತ, ಬ್ರೇಜಿಲ್, ಜರ್ಮನಿ ಮತ್ತು ಜಪಾನ್.
25. ಭಾರತ ಮತ್ತು ಶ್ರೀಲಂಕಾದ ನಡುವೆ ನಿರ್ಮಾಣಗೊಳ್ಳುತ್ತಿರುವ ಹಡಗು ಕಾಲುವೆಯನ್ನು ಸೇತು  ಸಮುದ್ರ ಎನ್ನುವರ.
26. ಭಾರತವು ಬಾಂಗ್ಲಾದೇಶದೊಡನೆ ಅತೀ ಉದ್ದವಾದ ಗಡಿಯನ್ನು ಹೊಂದಿದೆ.
27. ಪಾಕ್ ಆಕ್ರಮಿತ ಕಾಶ್ಮೀರದ ಗಡಿ ಪ್ರದೇದ ರೇಖೆಯನ್ನು ನಿಯಂತ್ರಣ ರೇಖೆ ಅಥವಾ ಎಲ್ಓಸಿ  (ಲೈನ್ ಆಪ್ ಕಂಟ್ರೋಲ್) ಎನ್ನುವರು.
28. ಕಾಶ್ಮೀರದ ಪಾಕ್ ಮತ್ತು ಚೈನಾ ಆಕ್ರಮಿತ ಪ್ರದೇಶಗಳನ್ನು ಪೋಕ ಎನ್ನುವರು.
29. ಭಾರತದ ನೆರೆಯ ದ್ವೀಪ ರಾಷ್ಟ್ರಗಳು- ಶ್ರೀಲಂಕಾ ಮತ್ತು ಮಾಲ್ಡಿವ್ಸ್.
30. ಭಾರತದ ಉದ್ದ-3214 ಕಿ ಮೀ ಮತ್ತು ಅಗಲ-2933 ಕಿ ಮೀ.
31. ಗುಜರಾತ ರಾಜ್ಯವು ಅತೀ ಉದ್ದವಾದ ಕರಾವಳಿ ತೀರ ಪ್ರದೇಶವನ್ನು ಹೊಂದಿದೆ.
32. ಭಾರತದ ಭೌಗೋಳಿಕ ಕೇಂದ್ರ- ಮದ್ಯಪ್ರದೇಶದ ಜಬ್ಬಲಪುರ.
33. ಭಾರತದ ಅತೀ ದೊಡ್ಡ ಜಿಲ್ಲೆ-ಗುಜರಾತನ ಕಚ್ ಹಾಗೂ ಕಾಶ್ಮೀರದ-ಲ್ಹೇ ಅತೀ
 ಚಿಕ್ಕ ಜಿಲ್ಲೆ-ಪಾಂಡಿಚೇರಿ
34. ಭಾರತವು 7 ರಾಷ್ಟ್ರಗಳೊಂದಿಗೆ ಭೂ ಗಡಿ ರೇಖೆಯನ್ನು ಹಾಗೂ ಶ್ರೀಲಂಕಾ ಮತ್ತು ಮಾಲ್ಡೀವ್ಸ್ಗಳೊಂದಿಗೆ ಸಾಗರ ವಲಯ ಗಡಿಯನ್ನು ಹೊಂದಿದೆ.

ಕಾಮೆಂಟ್‌ಗಳು

  1. ಸಾಧನೆ ಮಾಡಲು ಹೊರಟಿರುವ ನಮ್ಮಂಥ ಬಡ ವಿಧ್ಯಾರ್ಥಿಗಳಿಗೆ ತಾವುಗಳು ಉತ್ತಮ ವಿಷಯಗಳನ್ನು ನೀಡುತ್ತಿರುವುದು ಸಂತಸ ತಂದಿದೆ ಹಾಗೂ ಈ ಪೇಜ್ ನಲ್ಲಿರುವ಻ಅಂಶಗಳೇ ಸಾಕು ನಾವುಗಳು ಪರೀಕ್ಷೇಗೆ ತಯಾರಾಗಲು ಥ್ಯಾಂಕ್ಸ್ ಬ್ರದರ್

    ಪ್ರತ್ಯುತ್ತರಅಳಿಸಿ

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕನ್ನಡ ವರ್ಣಮಾಲೆ

ವರ್ಣಮಾಲೆ ಮತ್ತು ಧ್ವನ್ಯಂಗಗಳು ಕನ್ನಡ ವರ್ಣಮಾಲೆ         ಕನ್ನಡ ವರ್ಣಮಾಲೆಯಲ್ಲಿ ಒಟ್ಟು 49 ಅಕ್ಷರಗಳಿವೆ. ಅವುಗಳನ್ನು ಈ ಕೆಳಗಿನಂತೆ ವರ್ಗೀಕರಿಸಬಹುದು. •ಸ್ವರಗಳು ಮತ್ತು ಸಂಧ್ಯಕ್ಷರಗಳು (13) •ಯೋಗವಾಹಕಗಳು (2) •ವ್ಯಂಜನಗಳು (34) ಸ್ವರಗಳು: (ಒಟ್ಟು-13) "ಸ್ವತಂತ್ರವಾದ, ಸ್ಪಷ್ಟವಾದ ಉಚ್ಚಾರಣೆಯನ್ನು ಹೊಂದಿರುವ ಅಕ್ಷರಗಳನ್ನು 'ಸ್ವರಗಳು' ಎಂದು ಕರೆಯಲಾಗುತ್ತದೆ." ಕನ್ನಡ ವರ್ಣಮಾಲೆಯಲ್ಲಿ ಒಟ್ಟು 13 ಸ್ವರಗಳಿದ್ದು ಅವುಗಳಲ್ಲಿ ಎರಡು ಅಕ್ಷರಗಳನ್ನು ಸಂಧ್ಯಕ್ಷರಗಳೆಂದೂ ಕರೆಯಲಾಗುತ್ತದೆ. ಅವುಗಳೆಂದರೆ:- ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ       ಸ್ವರಗಳನ್ನು 'ಹ್ರಸ್ವಸ್ವರ' 'ಧೀರ್ಘಸ್ವರ' ಮತ್ತು 'ಸಂಧ್ಯಕ್ಷರ' ಎಂದು ಮೂರು ವಿಧಗಳಾಗಿ ವಿಂಗಡಿಸಬಹುದು. * ಹ್ರಸ್ವಸ್ವರಗಳು:-  ಒಂದು ಮಾತ್ರೆಯ ಕಾಲದಲ್ಲಿ ಉಚ್ಚರಿಸಲಾಗುವ ಸ್ವರಗಳಿಗೆ ಹ್ರಸ್ವಸ್ವರಗಳು ಎನ್ನುವರು.  -ಅವುಗಳೆಂದರೆ- ಅ ಇ ಉ ಋ ಎ ಒ (ಒಟ್ಟು 6) * ಧೀರ್ಘಸ್ವರಗಳು:- ಎರಡು ಮಾತ್ರೆಗಳ ಕಾಲದಲ್ಲಿ ಉಚ್ಚರಿಸಲಾಗುವ ಸ್ವರಗಳಿಗೆ ಧೀರ್ಘಸ್ವರಗಳು ಎನ್ನುವರು. ಅವುಗಳೆಂದರೆ- ಆ ಈ ಊ ಏ ಐ ಓ ಔ (ಒಟ್ಟು 7) [ಟಿಪ್ಪಣಿ:- ಯಾವುದೇ ಒಂದು ಅಕ್ಷರವನ್ನು ಉಚ್ಚರಿಸಲು ತೆಗೆದುಕೊಳ್ಳುವ ಸಮಯವನ್ನು ಮಾತ್ರೆಗಳಿಂದ ಅಳೆಯಲಾಗುತ್ತದೆ. 'ಅ' ಎಂಬ ಅಕ್ಷರವನ್ನು ಒಂದು ಮಾತ್ರೆಯ ಕಾಲದಲ್ಲಿ ಉಚ್ಚರಿ...

☼ ಭಾರತದ ನಗರಗಳು ಮತ್ತು ಅವುಗಳ ಅಡ್ಡಹೆಸರುಗಳು ☼

☼ ಭಾರತದ ನಗರಗಳು ಮತ್ತು ಅವುಗಳ ಅಡ್ಡಹೆಸರುಗಳು ☼ ☼ ಆಂದ್ರಪ್ರದೇಶ 1.ವಿಶಾಖಪಟ್ಟಣ     --  ಭಾಗ್ಯನಗರ,(city of destiny) 2.ವಿಜಯವಾಡ      --  ಗೆಲುವಿನ ಸ್ಥಾನ (place of victory)  3.ಗುಂಟುರು          --  ಮೆಣಸಿನಕಾಯಿಗಳ ನಗರ, ಮಸಾಲೆ ನಗರ ☼ ಉತ್ತರಪ್ರದೇಶ 1.ಆಗ್ರಾ             --  ತಾಜನಗರಿ 2.ಕಾನ್ಪುರ         --  ವಿಶ್ವದ ಚರ್ಮದ ನಗರ, ಉತ್ತರ ಭಾರತದ ಮಾಂಚೆಸ್ಟರ್ 3.ಲಕ್ನೋ          --  ನವಾಬರ ನಗರ (city of nawab's) 4.ಪ್ರಯಾಗ        --  ದೇವರ ಮನೆ 5.ವಾರಾಣಾಸಿ  --  ಭಾರತದ ಧಾರ್ಮಿಕ & ಆಧ್ಯಾತ್ಮಿಕ ನಗರ, ದೀಪಗಳ ನಗರ, ಭೂಮಿಯ ಮೇಲಿರುವಜೀವಂತ    ಹಳೆಯ ನಗರ, ಪವಿತ್ರ ನಗರ ☼ ಗುಜರಾಥ 1. ಅಹಮದಾಬಾದ   --  ಭಾರತದ ಬೋಸ್ಟಾನ್, ಭಾರತದ ಮಾಂಚೆಸ್ಟರ್, 2.ಸೂರತ್          ...

ಗುಣಿತಾಕ್ಷರಗಳು ಮತ್ತು ಸಂಯುಕ್ತಾಕ್ಷರಗಳು

ಗುಣಿತಾಕ್ಷರಗಳು ಮತ್ತು ಸಂಯುಕ್ತಾಕ್ಷರಗಳು      ಕನ್ನಡ ವರ್ಣಮಾಲೆಯ ಬಗ್ಗೆ ತಿಳಿದುಕೊಂಡ ನಂತರ ಕಲಿಯಬೇಕಾದ ಲಿಪಿ ರಚನೆಯ ಪ್ರಮುಖ ಭಾಗವೆಂದರೆ ಗುಣಿತಾಕ್ಷರಗಳು ಮತ್ತು ಸಂಯುಕ್ತಾಕ್ಷರಗಳದ್ದು. ಇವುಗಳ ಬಗ್ಗೆ ವಿವರವಾಗಿ ತಿಳಿಯೋಣ.        ನೀವು  ಕಾಗುಣಿತ ಎಂಬ ಪದವನ್ನು ಕೇಳಿದ್ದೀರಿ. ವರ್ಣಮಾಲೆಯಲ್ಲಿ ಕ್ ಇಂದ ಳ್ ವರೆಗಿನ 34 ಅಕ್ಷರಗಳಿಗೆ ಬೇರೆಬೇರೆ ಸ್ವರಗಳನ್ನು ಸೇರಿಸಿ ಬೇರೆಬೇರೆ ಅಕ್ಷರಗಳನ್ನು ಪಡೆಯಬಹುದು. ಈ ಪ್ರಕ್ರಿಯೆ ಕ್ ಅಕ್ಷರದಿಂದ ಆರಂಭವಾಗುವುದರಿಂದ ಇವುಗಳಿಗೆ ಕಾಗುಣಿತ ಎಂಬ ಹೆಸರು ಬಂದಿದೆ. ಇದನ್ನು ಅನೇಕ ಕಡೆ 'ಬಳ್ಳಿ' ಎಂದೂ ಕರೆಯುತ್ತಾರೆ. ಇದು ಸೂಕ್ತವೂ ಹೌದು. ಏಕೆಂದರೆ ಕ್ ಇಂದ ಳ್ ವರೆಗಿನ 34 ಅಕ್ಷರಗಳಿಗೆ ವಿವಿಧ ಸ್ವರಗಳನ್ನು ಸೇರಿಸುತ್ತಾ ಹೋದಂತೆ ಅಕ್ಷರಗಳ ಸಂಖ್ಯೆ ಬಳ್ಳಿಯಂತೆ ಬೆಳೆಯುತ್ತಾ ಹೋಗುತ್ತದೆ. ಇವನ್ನೇ ಗುಣಿತಾಕ್ಷರವೆಂದು ಹೇಳಲಾಗುತ್ತದೆ.            ಗುಣಿತಾಕ್ಷರಗಳು "ವ್ಯಂಜನಕ್ಕೆ ಸ್ವರ ಸೇರಿದಾಗ ಗುಣಿತಾಕ್ಷರವಾಗುತ್ತದೆ."     [ವ್ಯಂಜನ  +   ಸ್ವರ   =   ಗುಣಿತಾಕ್ಷರ] ಉದಾಹರಣೆಗೆ:-  ಕ್ ವ್ಯಂಜನಕ್ಕೆ ಬೇರೆ ಬೇರೆ ಸ್ವರಗಳನ್ನು ಸೇರಿಸೋಣ.     ...